ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ : 92 ಕೆಜಿ ಕುಸ್ತಿಯಲ್ಲಿ ಸಾಗರ ಲೋಕಾಪುರ ರಾಜ್ಯಮಟ್ಟಕ್ಕೆ ಪ್ರಥಮ, ರಾಷ್ಟ್ರಮಟ್ಟಕ್ಕೆ ಆಯ್ಕೆ

ರಬಕವಿ-ಬನಹಟ್ಟಿ : ಪಿಯು ಕಾಲೇಜು ಹಂತದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ತಾಲೂಕಿನ ಹಳಿಂಗಳಿ ಗ್ರಾಮದ ಶ್ರೀ ಸದ್ಗುರು ಶರಣಬಸವೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಕಲಾವಿಭಾಗದ ವಿದ್ಯಾರ್ಥಿ ಸಾಗರ ಲಕ್ಷ್ಮಣ ಲೋಕಾಪೂರ ಅವರು 92 ಕೆಜಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ)ಬೆಳಗಾವಿ ಹಾಗೂ ಶಾಂತಿನಿಕೇತನ ಪದವಿ ಪೂರ್ವ ಕಾಲೇಜು ಖಾನಾಪೂರ ಸಂಯುಕ್ತ ಆಶ್ರಯದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದು ಸಂಸ್ಥೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದ ವಿದ್ಯಾರ್ಥಿಗೆ ಸಂಸ್ಥೆ ಕಾರ್ಯಾಧ್ಯಕ್ಷರು ಹಾಗೂ ಕಮರಿಮಠದ ಪೀಠಾಧಿಪತಿ ಸದ್ಗುರು ಶಿವಾನಂದ ಸ್ವಾಮೀಜಿ ಹಾಗೂ ಆಡಳಿತ ಮಂಡಳಿ ಸದಸ್ಯರು, ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು, ಜಿಲ್ಲೆಯ ಕುಸ್ತಿ ತರಬೇತುದಾರರು, ಸಂಸ್ಥೆಯ ಎಲ್ಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

16/10/2024 09:44 pm

Cinque Terre

8.58 K

Cinque Terre

0