ಬೆಂಗಳೂರು: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಯನ್ನು ವಿಧಾನಸಭೆಯಲ್ಲಿ ಕೂಡಲೇ ಮಸೂದಿಸಬೇಕು. ಕನ್ನಡಿಗರ ಭವಿಷ್ಯದ ಪ್ರಶ್ನೆ ಮಸೂದೆಯನ್ನು ಮಂಡಿಸುವುದಾಗಿ ಭರವಸೆ ನೀಡಿ ಮಸೂದೆಯನ್ನು ಹಿಂದಕ್ಕೆ ಪಡೆದಿರುವುದು ಸರಿಯಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಬೆಂಗಳೂರಿನ ವಿಧಾನಸೌಧ ರಸ್ತೆಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ವಾಟಾಳ್ ನಾಗರಾಜ್ ಮಾತನಾಡಿದರು. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಅವರನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸರ್ಕಾರ ಕನ್ನಡಿಗರ ಉದ್ಯೋಗ ಮೀಸಲಾತಿ ಬಗ್ಗೆ ಮಸೂದೆ ಮಂಡಿಸದೆ ಹೋದರೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
PublicNext
25/07/2024 03:12 pm