ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ : ಪಾಲಿಕೆ ನಿರ್ಲಕ್ಷ್ಯ ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವು....

ತೆರೆದ ಚರಂಡಿಯಲ್ಲಿ ಎರಡು ವರ್ಷದ ಮಗು ಬಿದ್ದು ಅಸುನೀಗಿರುವ ಘಟನೆ ವಿಜಯಪುರ ನಗರದ ಬಾಗಾಯತ್ ಗಲ್ಲಿಯಲ್ಲಿ ನಡೆದಿದೆ.

ಮೃತ ಪಟ್ಟಿರುವ ಯಾಸೀನ್ ಸದ್ದಾಂ ಮುಲ್ಲಾ (2) ಅಣ್ಣನ ಜೊತೆ ಆಟವಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಚರಂಡಿ ನೀರಿಗೆ ಬಿದ್ದಿದ್ದಾನೆ. ಘಟನೆಯಿಂದ ಭಯಭೀತನಾಗಿ ಜೊತೆಗಿದ್ದ ನಾಲ್ಕು ವರ್ಷದ ಅಣ್ಣ ಓಡಿ ಮನೆಗೆ ವಿಷಯ ತಿಳಿಸಿದ್ದು, ಕುಟುಂಬಸ್ಥರು ಹಾಗೂ ನೆರೆ ಹೊರೆಯವರು ಸ್ಥಳಕ್ಕೆ ಧಾವಿಸಿ ಬಾಲಕನ ಮೃತದೇಹ ಹೊರತೆಗಿದ್ದಾರೆ.

ಕಳೆದ ಹಲವು ದಿನಗಳಿಂದ ಭಾರೀ ಮಳೆ ಹಿನ್ನೆಲೆ ಚರಂಡಿ ಮೇಲಿನ ಕಲ್ಲು ತೆಗೆಯಲಾಗಿತ್ತು. ಬಳಿಕ ಮಹಾನಗರ ಪಾಲಿಕೆಯಿಂದ ಚರಂಡಿ ಮೇಲಿನ ಕಲ್ಲು ಬಂದ್ ಮಾಡಿರಲಿಲ್ಲ. ಅವಘಡಕ್ಕೆ ಮಹಾನಗರ ಪಾಲಿಕೆಯ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ.

ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

-ಮಂಜು ಕಲಾಲ ಪಬ್ಲಿಕ್ ನೆಕ್ಸ್ಟ ವಿಜಯಪುರ

Edited By : Shivu K
PublicNext

PublicNext

16/10/2024 06:06 pm

Cinque Terre

22.9 K

Cinque Terre

1