ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಭಾಗದ ಗ್ರಾಮೀಣ ಪ್ರದೇಶದ ರಸ್ತೆಗಳೆಲ್ಲವೂ ಗುಂಡಿಮಯವಾಗಿದ್ದು ಶಾಸಕರು ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮೀಣ ರಸ್ತೆಗಳು ಸೇರಿದಂತೆ ಮುಖ್ಯ ರಸ್ತೆಗಳು ಗುಂಡಿ ಬಿದ್ದಿದು ರಸ್ತೆ ದುರಸ್ತಿ ವಿಚಾರದಲ್ಲಿ ಶಾಸಕರು ಶೂನ್ಯ ಸಾಧನೆ ಮಾಡಿದ್ದಾರೆಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಅಲ್ಲದೇ ರಸ್ತೆ ದುರಸ್ತಿ ಪಡಿಸಲು ಶಾಸಕರಿಗೆ ಒಂದು ವಾರ ಗಡುವು ನೀಡುತ್ತಿದ್ದು ಒಂದು ವಾರದಲ್ಲಿ ರಸ್ತೆ ದುರಸ್ತಿ ಪಡೆದದಿದ್ದರೆ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದೆಂದು ಶಾಸಕರಿಗೆ ಬಿಜೆಪಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
Kshetra Samachara
21/10/2024 05:46 pm