ದಾವಣಗೆರೆ : ಚಿತ್ತ ಮಳೆಗೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದ
ಗೌಡನ ಕೆರೆ ತುಂಬಿ ಕೋಡಿ ಬಿದ್ದು ಗ್ರಾಮಕ್ಕೆ ನೀರು ನುಗ್ಗಿದ ಪರಿಣಾಮ ಜನರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ರಾತ್ರಿಯಿಡಿ ನೀರು ಹೊರ ಹಾಕುವಲ್ಲಿ ನಿರತರಾಗಿದ್ದರು. ರಸ್ತೆಯಲ್ಲಿ ನಿಂತಿದ್ದ ಬೈಕ್, ಕಾರ್ ನೀರಿನಲ್ಲಿ ಮುಳುಗಡೆಯಾಗಿವೆ. ಅಕಾಲಿಕ ಮಳೆಗೆ ಬೆಳೆ ಸೇರಿದಂತೆ ಮನೆಗಳಿಗೂ ಹಾನಿ ಆಗಿದ್ದು ರೈತರು ಆತಂಕದಲ್ಲಿ ಜೀವನ ಮಾಡುವಂತಾಗಿದೆ.
PublicNext
22/10/2024 03:32 pm