ಹಾವೇರಿ: ಬೈಕ್ ಮೇಲೆ ಏಕಾಏಕಿ ಹಳೆಯ ಬೇವಿನಮರ ಬಿದ್ದು ಇಬ್ಬರು ಸವಾರರು ಸಾವನ್ನಪ್ಪಿರುವ ದುರ್ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದ ಎಪಿಎಂಸಿ ಬಳಿ ನಡೆದಿದೆ.
ಮೃತರನ್ನು 28 ವರ್ಷದ ಹನುಮಂತ ಮತ್ತು 29 ವರ್ಷದ ಮಂಜುನಾಥ ಎಂದು ಗುರುತಿಸಲಾಗಿದೆ. ಹನುಮಂತ ಯತ್ತಿನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಮಂಜುನಾಥ್ ಚಿನ್ನಮುಳಗುಂದ ಗ್ರಾಮದ ನಿವಾಸಿ. ಹಿರೇಕೆರೂರು ಮತ್ತು ಮಾಸೂರಿಗೆ ಹೋಗುವ ರಸ್ತೆಯಲ್ಲಿ ದುರ್ಘಟನೆ ನಡೆದಿದೆ.
ಮೃತದೇಹಗಳನ್ನು ಹಿರೇಕೆರೂರು ತಾಲೂಕು ಆಸ್ಪತ್ರೆಗೆ ತರಲಾಗಿದೆ. ಸ್ಥಳಕ್ಕೆ ಹಿರೇಕೆರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಚಾರ ಅಸ್ತವ್ಯಸ್ತಗೊಂಡಿದ್ದು ಬಿದ್ದ ಬೇವಿನಮರ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
PublicNext
22/07/2024 06:54 pm