ನವಲಗುಂದ : ಗುಡಿಸಾಗರ ಗ್ರಾಮದಲ್ಲಿ ಪಂಜಿನ ಮೆರವಣಿಗೆ
ನವಲಗುಂದ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ನಿರ್ಮಾಣ ನಿಧಿ ಸಮರ್ಪಣ ಅಭಿಯಾನದ ಅಂಗವಾಗಿ ಮಂಗಳವಾರ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.
ಬೃಹತ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸುವುದರ ಮೂಲಕ ಮಹಾ ಅಭಿಯಾನಕ್ಕೆ ಚಾಲನೆ ದೊರಕಿತು. ಇನ್ನು ಈ ವೇಳೆ ಗ್ರಾಮಸ್ಥರು ಸೇರಿದಂತೆ ಭಜನಾ ತಂಡಗಳು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.