ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಸಾವಿರಾರು ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಂಡಿರುವ ಬಿಆರ್ಟಿಎಸ್ ಯೋಜನೆಯ "ಚಿಗರಿ' ಬಸ್ಸು ಮತ್ತೆ ಟ್ರೋಲ್ಗೆ ಒಳಗಾಗಿದೆ.
ಈ ಬಸ್ನಲ್ಲಿ ಸರಿಯಾಗಿ ಎಸಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಆಗಾಗ ಕೇಳಿ ಬರುತ್ತಲೇ ಇತ್ತು. ಈಗ ಮಳೆಯಾದರೆ ಸಾಕು ಈ ಬಸ್ಗಳು ಸೋರಲು ಆರಂಭಿಸಿವೆ. ಬುಧವಾರ ಸುರಿದ ಮಳೆಯಿಂದಾಗಿ ಚಿಗರಿ ಬಸ್ಸೊಂದು ಸೋರುತ್ತಿತ್ತು. ಈ ವೇಳೆ ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಛತ್ರಿ ಹಿಡಿದು ಕುಳಿತು ಪ್ರಯಾಣಿಸಿದ್ದಾರೆ. ಸದ್ಯ ಈ ವೀಡಿಯೋ ವೈರಲ್ ಆಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
17/10/2024 08:16 am