ಕೊಡಗು: ಜಿಲ್ಲೆ ನಾಪೋಕ್ಲು ಸಮೀಪದ ಕಡಂಗಪಟ್ಟಣದಲ್ಲಿ ಕಾರ್ಯಾಚರಿಸುತ್ತಿರುವ ಲೈಫ್ ಕೇರ್ ಡಯಾಗ್ನೋಸ್ಟಿಕ್ ಸೆಂಟರ್ ವತಿಯಿಂದ ಸಾರ್ವಜನಿಕರಿಗೆ ಆಯೋಜಿಸಲಾದ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ನಡೆಯಿತು.
ಶಿಬಿರವನ್ನು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಜೀವನ್ ಗೌಡ ಉದ್ಘಾಟಿಸಿದರು. ಶಿಬಿರದಲ್ಲಿ ರಕ್ತದೋತ್ತಡ,ಸಕ್ಕರೆ ಕಾಯಿಲೆ ಹಾಗೂ ವೈದ್ಯಕೀಯ ತಜ್ಞರ ಪರೀಕ್ಷೆ ನಡೆಯಿತು.ಕಡಂಗ ವ್ಯಾಪ್ತಿಯ 60ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಪಾಲ್ಗೊಂಡು ಪ್ರಯೋಜನವನ್ನು ಪಡೆದು ಕೊಂಡರು. ಈ ಸಂದರ್ಭ ಲೈಫ್ ಕೇರ್ ನ ಕೌಶಿಕ್ ಮಾತನಾಡಿ ನಮ್ಮ ಸಂಸ್ಥೆ ವತಿಯಿಂದ ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.
ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜೀವನ್ ಅವರ ನೇತೃತ್ವದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಹಾಗೂ ಬಿಪಿ,ಶುಗರ್ ಪರೀಕ್ಷೆಯನ್ನು ಮಾಡಲಾಗಿದೆ. ಶಿಬಿರದಲ್ಲಿ ಥೈರಾಯ್ಡ್ ಪರೀಕ್ಷೆಯನ್ನು ರಿಯಾಯಿತಿ ದರದಲ್ಲಿ ಮಾಡಿಕೊಡಲಾಗಿದೆ. ಶಿಬಿರದಲ್ಲಿ ಕಡಂಗ ವ್ಯಾಪ್ತಿಯ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದುಕೊಂಡಿದ್ದಾರೆ ಎಂದರು.
PublicNext
22/10/2024 12:09 pm