ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂಜನಗೂಡು: ವ್ಯಕ್ತಿಯ ಕತ್ತು ಕೊಯ್ದು ಮರ್ಡರ್!- ಸ್ಥಳದಲ್ಲಿ ನಿಂಬೆಹಣ್ಣು ಪತ್ತೆ, ವಾಮಾಚಾರ ಮಾಡಿ ಕೊಲೆ?

ನಂಜನಗೂಡು: ಕತ್ತು ಕೊಯ್ದ ಪರಿಣಾಮ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸಮೀಪದಲ್ಲಿ ನಡೆದಿದೆ.

ನಿನ್ನೆ ಹುಣ್ಣಿಮೆ ಹಿನ್ನೆಲೆಯಲ್ಲಿ ವಾಮಾಚಾರ ನಡೆಸಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇದರ ಕುರುಹಾಗಿ ಸ್ಥಳದಲ್ಲಿ ಮಂತ್ರಿಸಿರುವ ನಿಂಬೆಹಣ್ಣು,101 ರೂಪಾಯಿ ನಗದು, ಎಲೆ ಅಡಿಕೆ ಕಂಡುಬಂದಿದೆ. ಮಲ್ಕುಂಡಿ ಗ್ರಾಮದ ಸದಾಶಿವ(43) ಮೃತ ವ್ಯಕ್ತಿ.

ಮಡುವಿನಹಳ್ಳಿ ಗ್ರಾಮದ ಪ್ರೌಢಶಾಲೆಯ ಸಮೀಪ ನೀರು ಹರಿಯುವ ಹಳ್ಳದಲ್ಲಿ ನರಳಾಡುತ್ತಿದ್ದ ದೃಶ್ಯ ಸ್ಥಳೀಯರೊಬ್ಬರ ಕಣ್ಣಿಗೆ ಬಿದ್ದಿದೆ. ನಂತರ ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪಿಎಸ್ಐ ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನರಳಾಡುತ್ತಿದ್ದ ಸದಾಶಿವ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗಮಧ್ಯೆ ಸದಾಶಿವ ಸಾವನ್ನಪ್ಪಿದ್ದಾರೆ. ವಾಮಾಚಾರ ಮಾಡಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ , ಡಿವೈಎಸ್ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Vinayak Patil
PublicNext

PublicNext

18/10/2024 04:31 pm

Cinque Terre

16.19 K

Cinque Terre

0

ಸಂಬಂಧಿತ ಸುದ್ದಿ