ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂಜನಗೂಡು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು

ನಂಜನಗೂಡು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಸ್ಕೂರು ಗ್ರಾಮದ ಬಳಿ ಸಂಭವಿಸಿದೆ.

ಡಾ.ಕಿಸಾನ್ ಅಗ್ರಿ ಕ್ಲಿನಿಕ್ ಪ್ರೈವೇಟ್ ಲಿಮಿಟೆಡ್ ಎಂಬ ಖಾಸಗಿ ಕೃಷಿ ಸಂಸ್ಥೆಯಲ್ಲಿ ಕೃಷಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸುನಿಲ್ (24) ಮೃತ ದುರ್ದೈವಿ. ನಿನ್ನೆ ಸಂಜೆ ಏಳು ಗಂಟೆಯ ಸಮಯದಲ್ಲಿ ತನ್ನ ಕೆಲಸ ಮುಗಿಸಿ ಹುಸ್ಕೂರು ರಸ್ತೆ ಮೂಲಕ ಹಗಿನವಾಳು ಗ್ರಾಮದ ಬಳಿ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಸುನಿಲ್ ಸುಮಾರು 20 ಅಡಿ ದೂರ ಹಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದರಾಜು, ಸಿಬ್ಬಂದಿ ಮಹೇಂದ್ರ, ವಸಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿದ್ದಾರೆ. ಅಪರಿಚಿತ ವಾಹನ ಪತ್ತೆಗೆ ಸಂಚಾರಿ ಪೊಲೀಸರು ಮುಂದಾಗಿದ್ದಾರೆ.

Edited By : Ashok M
PublicNext

PublicNext

21/10/2024 07:17 pm

Cinque Terre

19.69 K

Cinque Terre

0

ಸಂಬಂಧಿತ ಸುದ್ದಿ