ಮೈಸೂರು : ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯನವರು ಭರ್ಜರಿ ಗಿಫ್ಟ್ ನೀಡಿದ್ದಾರೆ. ವಿವಿಧ ಇಲಾಖೆಗಳ ಬರೋಬ್ಬರಿ 501.81 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.
ಹೌದು, ಇಂದು ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯನವರು ವರುಣಾ ಕ್ಷೇತ್ರದ ತಾಯೂರು ಸಮೀಪ ವೇದಿಕೆ ಕಾರ್ಯಕ್ರಮದಲ್ಲಿ ಈ ಎಲ್ಲಾ ಯೋಜನೆಗಳ ಕಾಮಗಾರಿಗಳಿಗೆ ಚಾಲನೆ ನೀಡಿದರು. ಪ್ರಮುಖವಾಗಿ, ರಸ್ತೆ ಕಾಮಗಾರಿ, ಆಸ್ಪತ್ರೆ, ಪಶುವೈದ್ಯ ಆಸ್ಪತ್ರೆ, ಸಮುದಾಯ ಭವನಗಳ ಕಾಮಗಾರಿಗೆ ಚಾಲನೆ ನೀಡಿದ್ರು. ಬಳಿಕ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನ ವಿತರಣೆ ಮಾಡಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ್ರು.
PublicNext
22/10/2024 05:32 pm