ಮೈಸೂರು: ಇಡಿ ದಾಳಿ ಕುರಿತು ಮುಡಾ ಕಾರ್ಯದರ್ಶಿ ಪ್ರಸನ್ನಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇಡಿ ಅಧಿಕಾರಿಗಳ ತಂಡ ಮುಡಾಗೆ ಭೇಟಿ ನೀಡಿದ್ದು, ಅವರು ಕೇಳುವ ಎಲ್ಲಾ ಮಾಹಿತಿಗಳನ್ನು ನೀಡುತ್ತೇವೆ. ಇಂದು ಮತ್ತು ನಾಳೆ ಇಡಿ ಅಧಿಕಾರಿಗಳ ತಂಡ ಕಡತಗಳ ಪರಿಶೀಲನೆ ನಡೆಸಲಿದೆ.
ಇಡಿ ಅಧಿಕಾರಿಗಳು ನಿರ್ದೇಶನ ನೀಡಿದರೆ ಹೆಚ್ಚಿನ ಮಾಹಿತಿ ನೀಡುತ್ತೇವೆ. ಅಲ್ಲಿಯವರೆಗೂ ಸಹಕಾರ ನೀಡಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಮುಡಾ ಕಾರ್ಯದರ್ಶಿ ಪ್ರಸನ್ನಕುಮಾರ್ ಮನವಿ ಮಾಡಿದ್ದಾರೆ.
PublicNext
18/10/2024 10:12 pm