ಕನಕಪುರ: ಮದುವೆಗೆ ಹೊರಟಿದ್ದ ಬಸ್ ಪಲ್ಟಿಯಾಗಿದ್ದರಿಂದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಸಂಗಮದ ಬಳಿಯ ಮಡಿವಾಳ ಬಳಿ ಭಾನುವಾರ ನಡೆದಿದೆ. ಗಾಯಾಳುಗಳನ್ನು ಕನಕಪುರದ ಐಪಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಗಡೇಗೌಡನದೊಡ್ಡಿ ಗ್ರಾಮದ ಗಂಡು ಮತ್ತು ಹೆಣ್ಣಿನ ಮದುವೆಯನ್ನು ಮಡಿವಾಳದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ ಎರಡು ಖಾಸಗಿ ಬಸ್ ಗಳಲ್ಲಿ ಗ್ರಾಮದ ಜನರು ಮದುವೆಗೆ ಹೊರಟಿದ್ದರು. ಒಂದು ಬಸ್ ಸಂಗಮ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದರು.
PublicNext
20/10/2024 01:30 pm