ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ: ನಾವು ಕೋಲಾರ ಬಿಡಲಿಲ್ಲವೇ? ಹಾಗೆಯೇ ಜೆಡಿಎಸ್ ಚನ್ನಪಟ್ಟಣ ಬಿಟ್ಟು ಕೊಡಲಿ- ಅಶ್ವತ್ಥನಾರಾಯಣ್

ರಾಮನಗರ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಾವು ಗೆದ್ದಿದ್ದ ಕೋಲಾರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲಿಲ್ಲವೇ ? ಅದೇ ರೀತಿ, ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟು ಕೊಡುವಂತೆ ನಾವು ಜೆಡಿಎಸ್ ಗೆ ಒತ್ತಾಯಿಸುತ್ತೇವೆ ಎಂದು ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಾರದ ಸಂಸದರಾಗಿದ್ದ ಮುನಿಸ್ವಾಮಿ ಅವರಿಗೆ ಟಿಕೆಟ್ ಕೈ ತಪ್ಪಿದರೂ, ಪಕ್ಷದ ಸೂಚನೆಯಂತೆ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಪರ ಕೆಲಸ ಮಾಡಿ ಗೆಲುವಿಗೆ ಶ್ರಮಿಸಲಿಲ್ಲವೇ ? ಇಲ್ಲಿ ಬಿಜೆಪಿ ಅಥವಾ ಜೆಡಿಎಸ್ ಟಿಕೆಟ್ ನ ಪ್ರಬಲ ಆಕಾಂಕ್ಷಿಯಾಗಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರೇ ಅಭ್ಯರ್ಥಿಯಾಗಲಿದ್ದಾರೆ. ನಾವು ಪಕ್ಷ ನೋಡದೆ ಎನ್ ಡಿಎ ಅಭ್ಯರ್ಥಿ ಎಂದು ಗೆಲುವಿಗಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Edited By : Vinayak Patil
PublicNext

PublicNext

19/10/2024 07:32 pm

Cinque Terre

29.67 K

Cinque Terre

0

ಸಂಬಂಧಿತ ಸುದ್ದಿ