ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚನ್ನಪಟ್ಟಣ : ಯಾವ ಪಕ್ಷದಿಂದ ಕಣಕ್ಕಿಳಿಯಬೇಕೆಂದು ಸಂಜೆಯೊಳಗೆ ತೀರ್ಮಾನ - ಸಿ.ಪಿ ಯೋಗೇಶ್ವರ್

ಚನ್ನಪಟ್ಟಣ : ಉಪಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಯಾವ ಪಕ್ಷದಿಂದ ಕಣಕ್ಕಿಳಿಯಬೇಕು ಎಂಬುದನ್ನು ಮಂಗಳವಾರ ಸಂಜೆಯೊಳಗೆ ಘೋಷಿಸುತ್ತೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಪಟ್ಟಣದ ಕುವೆಂಪುನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆಗೂ ಮುಂಚೆ, ಮನೆ ಮುಂದೆ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಗುರುವಾರ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದೇನೆ. ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆ ಇರುವುದರಿಂದ ಸಂಜೆವರೆಗೆ ಕಾಯುವೆ. ಒಂದು ವೇಳೆ ಸಿಗದಿದ್ದರೆ ನಿಮ್ಮ ಅಭಿಪ್ರಾಯ ಆಧರಿಸಿ ಸ್ವತಂತ್ರವಾಗಿ ಅಥವಾ ಬೇರೆ ಪಕ್ಷದಿಂದ ಕಣಕ್ಕಿಳಿಯಬೇಕೊ ಎಂಬುದನ್ನು ನಿರ್ಧರಿಸುತ್ತೇನೆ ಎಂದರು.

Edited By : Nagaraj Tulugeri
Kshetra Samachara

Kshetra Samachara

22/10/2024 02:09 pm

Cinque Terre

860

Cinque Terre

0

ಸಂಬಂಧಿತ ಸುದ್ದಿ