ಶಿವಮೊಗ್ಗ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಶಿವಮೊಗ್ಗ ತಾಲೂಕು ಘಟಕದ ವತಿಯಿಂದ ಜನವರಿ 25 ಮತ್ತು 26ರಂದು ವೆಂಕಟೇಶ ನಗರದ ಬಸವಕೇಂದ್ರದಲ್ಲಿ ಶರಣ ಸಾಹಿತ್ಯ ಸಮ್ಮೇಳನ ಹಾಗೂ 100ನೇ ವಚನ ಮಂಟಪ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಆರ್.ಎಸ್.ಸ್ವಾಮಿ ತಿಳಿಸಿದರು.
ನಗರದಲ್ಲಿ ಮಾತನಾಡಿದ ಅವರು,ಜನವರಿ 25 ರಂದು ಸಂಜೆ 6 ಗಂಟೆಗೆ ಬಸವ ಕೇಂದ್ರದ ಡಾ. ಬಸವಮರುಳಸಿದ್ಧ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ವಚನ ಮಂಟಪ 100ನೇ ವಿಶೇಷ ಕಾರ್ಯಕ್ರಮ ನಡೆಯಲಿದ್ದು, ಕಲಬುರಗಿ ಚಿಗರಹಳ್ಳಿ ಮರುಳ ಶಂಕರದೇವರ ಗುರುಪೀಠದ ಸಿದ್ಧಬಸವ ಕಬೀರ ಮಹಾಸ್ವಾಮಿಗಳು ಉದ್ಘಾಟಿಸಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.
Kshetra Samachara
24/01/2025 07:23 pm