ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ಪ್ರಾಥಮಿಕ ಶಾಲಾ ಶಿಕ್ಷಕರ ವಿಭಾಗದಿಂದ ಮೂವರು ಸ್ಪರ್ಧೆ - ಶಿಕ್ಷಕರಿಂದ ಶಕ್ತಿ ಪ್ರದರ್ಶನ

ಸಾಗರ: ಅ.28 ರಂದು ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಚುನಾವಣೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ವಿಭಾಗದಿಂದ ರಾಜಶೇಖರ ಶೆಟ್ಟಿ, ದೇವೇಂದ್ರಪ್ಪ ಕೆ. ಹಾಗೂ ಸೋಮಪ್ಪ ಹೆಚ್ ಚುನಾವಣಾ ಸ್ಪರ್ಧೆ ಮಾಡಿದ್ದು ಸಮಸ್ತ ಶಿಕ್ಷಕರ ಬೆಂಬಲಿತ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ನೀಡುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು.

ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಾಗರ ಶಾಖೆಯ ಅಧ್ಯಕ್ಷ ಮಾಲ್ತೇಶಪ್ಪ ರವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಸಮಸ್ತ ಶಿಕ್ಷಕರು ನಮ್ಮ ಮೂವರು ಅಭ್ಯರ್ಥಿಗಳಿಗೆ ಮತ ನೀಡುತ್ತೇವೆ ಎನ್ನುವ ಘೋಷಣೆ ಮೂಲಕ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ.

Edited By : Abhishek Kamoji
Kshetra Samachara

Kshetra Samachara

22/10/2024 04:48 pm

Cinque Terre

1.56 K

Cinque Terre

0

ಸಂಬಂಧಿತ ಸುದ್ದಿ