ಮುಲ್ಕಿ ತಾಲೂಕಿನ ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್, ಉಪಾಧ್ಯಕ್ಷೆ ಶಶಿಕಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರತಿಭಾ ಕುಡ್ತಡ್ಕ, ಪಂಚಾಯತ್ ಸದಸ್ಯರು , ಸಂಜೀವಿನಿ ಒಕ್ಕೂಟದ ಸದಸ್ಯರ ನಿಯೋಗ
ಎಸ್ ಎಲ್ ಆರ್ ಎಂ ಘಟಕ ವೀಕ್ಷಣೆಗಾಗಿ ಉಡುಪಿ ಜಿಲ್ಲೆಯ ಹೆಜಮಾಡಿ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದರು
ತಂಡದ ಭೇಟಿ ಹಾಗೂ ವೀಕ್ಷಣೆಗೆ ವ್ಯವಸ್ಥೆಗೊಳಿಸಿ, ಅನುವು ಮಾಡಿಕೊಟ್ಟ ಹೆಜಮಾಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಪ್ರಾಣೇಶ್ ಹೆಜಮಾಡಿ ಮಾತನಾಡಿ ಯಾವುದೇ ರೀತಿಯ ಮಾಹಿತಿ, ತರಬೇತಿ ನೀಡುವ ಮೂಲಕ ಘಟಕದ ನಿರ್ವಹಣೆಗೆ ಸರ್ವ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಹೆಜಮಾಡಿ ಉಪಾಧ್ಯಕ್ಷರಾದ ಪವಿತ್ರ ಲೋಕೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮತಿ ಹಾಗೂ ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸ್ವಚ್ಛತಾ ಘಟಕವನ್ನು ನಿರ್ವಹಿಸುವವರು ಸಂಗ್ರಹಣೆ, ವಿಂಗಡಣೆ ಹಾಗೂ ನಿರ್ವಹಣೆಯ ಬಗ್ಗೆ ವಿಸ್ತೃತವಾಗಿ ಮಾಹಿತಿ ಒದಗಿಸಿದರು.
Kshetra Samachara
3 years ago
Login with Mobile