ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ಕನ್ನಡ ರಾಜ್ಯೋತ್ಸವಕ್ಕೆ ಸಕಲ‌ ಸಿದ್ಧತೆ ಕೈಗೊಳ್ಳುವಂತೆ ಡಿಸಿ ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನವೆಂಬರ್‌ 1 ರಂದು ನಡೆಯುವ ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ವಿವಿಧ ಅಧಿಕಾರಿಗಳ ನೇತೃತ್ವದ ಉಪ ಸಮಿತಿಗಳನ್ನು ರಚಿಸಿ, ಜವಾಬ್ದಾರಿ ನೀಡಿದರು. ಎಲ್ಲಾ ಉಪ ಸಮಿತಿಗಳು ತಮಗೆ ನೀಡಲಾದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸ್ವಾಗತ, ಮೆರವಣಿಗೆ, ಸ್ತಬ್ಧಚಿತ್ರ, ಧ್ವಜಾರೋಹಣ, ವೇದಿಕೆ, ಪಥಸಂಚಲನ, ಸಾಂಸ್ಕೃತಿಕ, ಬಹುಮಾನ ವಿತರಣೆ ಕುರಿತು ವಿವರಿಸಿದರು.

Edited By : Vijay Kumar
Kshetra Samachara

Kshetra Samachara

21/10/2024 10:05 pm

Cinque Terre

6.6 K

Cinque Terre

0

ಸಂಬಂಧಿತ ಸುದ್ದಿ