ಯಲ್ಲಾಪುರ : ಪಟ್ಟಣದ ಬೆಲ್ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆಯ ಆಗರವಾಗಿದ್ದು, ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿಯ ಅಧ್ಯಕ್ಷ ಅಬ್ದುಲ್ ಅಲಿ ಹಮೀದ್ ಅವರು ಪಟ್ಟಣ ಪಂಚಾಯತಿ ಅಧಿಕಾರಿಗಳೊಂದಿಗೆ ಮಂಗಳವಾರ ಇಂದಿರಾ ಕ್ಯಾಂಟೀನ್ ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸ್ವಚ್ಛತೆಯನ್ನು ಕಾಪಾಡಿಕೊಂಡು ಜನರಿಗೆ ಸರಿಯಾಗಿ, ಶುಚಿ,ರುಚಿಯಾದ ಆಹಾರವನ್ನು ವಿತರಿಸುವಂತೆ ಸೂಚಿಸಿದರು.
Kshetra Samachara
22/10/2024 03:50 pm