ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂಗನವಾಡಿ ಕಾರ್ಯಕರ್ತೆಯ ಕರ್ತವ್ಯ ಕುರಿತು ಭೀಮಣ್ಣನಾಯ್ಕ್ ಶ್ಲಾಘನೆ : ಕಾರ್ಯಕರ್ತೆಯರ ಸಮಸ್ಯೆಗಳ ಕುರಿತು ಸದನದಲ್ಲಿ ಧ್ವನಿ ಎತ್ತುವುದಾಗಿ ಭರವಸೆ

ಸಿದ್ದಾಪುರ : ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ 2ನೇ ತಾಯಿ ಇದ್ದಂತೆ, ಸಮಾಜದ ಮುಖ್ಯ ವಾಹಿನಿಗೆ ಮಕ್ಕಳನ್ನು ತರಲು ಅವರಿಗೆ ಸಂಸ್ಕಾರವನ್ನ ನೀಡಲು ಶ್ರಮಿಸುತ್ತಿರುವ ನಿಮ್ಮ ಕಾರ್ಯ ಶ್ಲಾಘನೀಯ ನಿಮ್ಮ ಕಾರ್ಯ ವ್ಯಾಪ್ತಿ ದೊಡ್ಡದಿದ್ದರೂ ಉತ್ತಮವಾಗಿ ಕಾರ್ಯನಿರ್ವಹಿಸುವ ಮನಸ್ಸು ನೀವು ಹೊಂದಿದ್ದೀರಿ,ಕೇಂದ್ರ ರಾಜ್ಯ ಸರಕಾರಗಳು ಮುಖ್ಯ ಮಂತ್ರಿಗಳು, ಸಚಿವರು ಇಲಾಖೆ ನಿಮ್ಮ ಸಮಸ್ಯೆ ಅರ್ಥೈಸಿಕೊಂಡು ಕಣ್ಣೀರು ಒರೆಸುವ ಕೆಲಸ ಮಾಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು

ಅವರು ಪಟ್ಟಣದ ಶಂಕರ್ ಮಠದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸ್ವತಂತ್ರ ಸಂಘ ದವರು ಏರ್ಪಡಿಸಿದ್ದ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಲಾಖೆ ನೀಡುವ ಸೌಲಭ್ಯಗಳನ್ನು ಮಕ್ಕಳಿಗೆ ನೀಡಿ ಅವರನ್ನು ಸದೃಢ ತನ್ನಾಗಿ ಮಾಡುವ ಕೆಲಸದ ಜೊತೆಯಲ್ಲಿ ತಂದೆ ತಾಯಿಂದ ಮನೆಯಲ್ಲಿ ನೋಡುವುದಕ್ಕಿಂತ ಹೆಚ್ಚಿನದಾಗಿ ಗಮನಕೊಟ್ಟು ಪಾಲನೆ ಮಾಡುತ್ತೀರಿ ನಿಮ್ಮ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಲೇಬೇಕು ಎಂದರು ಹಾಗೂ ನಿಮ್ಮ ಸಮಸ್ಯೆಗಳ ಕುರಿತು ಸದನದಲ್ಲಿ ಧ್ವನಿ ಎತ್ತುವೆ ಎನ್ನುವ ಭರವಸೆ ನೀಡಿದರು.

ಸಾಮಾಜಿಕ ಹೋರಾಟಗಾರ ಅನಂತ ಮೂರ್ತಿ ಹೆಗಡೆ ಮಾತನಾಡಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷಣ ವನ್ನ ಅಂಗನವಾಡಿಯಲ್ಲಿ ಕಲಿಸಲಾಗುತ್ತದೆ ಅದರ ಜೊತೆಯಲ್ಲಿ ತಮ್ಮ ಇಲಾಖೆ ಮತ್ತು ಬೇರೆ ಬೇರೆ ಇಲಾಖೆ ಕೆಲಸವನ್ನು ಸಹ ನಿರ್ವಹಿಸಬೇಕಿದೆ ಈ ರೀತಿ ಸರಕಾರದ 10 ಹಲವು ಯೋಜನೆಗಳನ್ನು ಜನರಿಗೆ ತಲುಪಿಸುವ ಇವರಿಗೆ ಕಡಿಮೆ ವೇತನವನ್ನು ನೀಡಿ ಸರ್ಕಾರಗಳು ಕಣ್ಣೀರು ಹಾಕುವಂತೆ ಮಾಡಿವೆ , ಇತರೆ ಇಲಾಖೆ ಅಧಿಕಾರಿಗಳಿಗೆ ನೀಡುವ ಸಂಬಳದಂತೆ ಇವರಿಗೂ ಯಾಕೆ ನೀಡುತ್ತಿಲ್ಲ ಇವರೇನು ಕೆಲಸ ಮಾಡುತ್ತಿಲ್ಲವಾ ಎಂದು ಪ್ರಶ್ನಿಸಿದರು, ಆದಷ್ಟು ಬೇಗ ನಿಮ್ಮ ಸಮಸ್ಯೆಗಳು ಬಗೆಹರಿಯಲಿ, ಮುಂದಿನ ದಿನದಲ್ಲಿ ನೀವು ಯಾವುದೇ ಹೋರಾಟಕ್ಕೂ ಕರೆದರೂ ನಾನು ಬರಲು ಸಿದ್ಧನಿದ್ದೇನೆ ಎಂದರು. ಸಂಘಟನೆಯ ರಾಜ್ಯಾಧ್ಯಕ್ಷೆ ಜಿ ಪ್ರೇಮಾ, ಜಿಲ್ಲಾಧ್ಯಕ್ಷೆ ಅನಿತಾ ಶೇಟ್, ಸಿಡಿಪಿಒ ಪೂರ್ಣಿಮಾ ದೊಡ್ಮನಿ ಮಾತನಾಡಿದರು. ಕೃಷ್ಣಮೂರ್ತಿ ಐಸೂರ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಾಲೂಕ ಅಧ್ಯಕ್ಷೆ ಯಮುನಾ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಭಾರತಿ ನಾಯ್ಕ ಸ್ವಾಗತಿಸಿದರು. ರೇಖಾ ಹೆಗಡೆ ನಿರೂಪಿಸಿದರು. ಶೋಭಾ ನಾಯ್ಕ ವಂದಿಸಿದರು.

ಕನಿಷ್ಠ ವೇತನ, ಹೆಚ್ಚುವರಿ ಕೆಲಸ, ಕಡಿತಗೊಳಿಸಬೇಕು,

Edited By : PublicNext Desk
Kshetra Samachara

Kshetra Samachara

19/10/2024 08:10 pm

Cinque Terre

2.3 K

Cinque Terre

0

ಸಂಬಂಧಿತ ಸುದ್ದಿ