ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ: ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ್.

ಯಾದಗಿರಿ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯದ ಉದ್ದಗಲಕ್ಕೂ ಕನ್ನಡ ಜ್ಯೋತಿ ರಥಯಾತ್ರೆಯನ್ನು ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ನಗರದ ಪ್ರಮುಖ ಬೀದಿಗಳಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯ ಅದ್ದೂರಿ ಮೆರವಣಿಗೆ ಜರುಗಿತು. ಹೊಸ ಬಸ್ ನಿಲ್ದಾಣದಿಂದ ಬಸವೇಶ್ವರ ವೃತ್ತ ಚೆನ್ನಮ್ಮ ವೃತ್ತ, ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನವರೆಗೂ ಪಾದಯಾತ್ರೆ ಮಾರ್ಗವಾಗಿ ಕನ್ನಡ ಜ್ಯೋತಿ ರಥಯಾತ್ರೆ ಸಾಗಿತು. ಈ ಸಂದರ್ಭದಲ್ಲಿ ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ ಸಂಗೀತ ವಾದ್ಯಗಾರರು ಕನ್ನಡ ಮಾತೆಗೆ ಜೈ, ಜೈ ಕರ್ನಾಟಕ ಮಾತೆ, ಕನ್ನಡದ ತೇರು ನಾಡಿನಾದ್ಯಂತ ಸಂಚರಿಸುತ್ತಿರುವುದು ಹೆಮ್ಮೆ ಎಂಬ ಘೋಷಣೆಗಳು ಮುಗಿಲು ಮುಟ್ಟಿದ್ದವು. ಇದೇ ಸಂದರ್ಭದಲ್ಲಿ ತಾಲೂಕಾಡಳಿತ ಅಧಿಕಾರಿಗಳು ಕನ್ನಡಪರ ಹೋರಾಟಗಾರರು, ಸಾಹಿತಿಗಳು, ಶಾಲಾ ಶಿಕ್ಷಕರು ಕನ್ನಡಾಭಿಮಾನಿಗಳು ಭಾಗವಹಿಸಿದರು.

Edited By : Shivu K
PublicNext

PublicNext

15/10/2024 04:53 pm

Cinque Terre

16.91 K

Cinque Terre

0