ಧಾರವಾಡ: ಧಾರವಾಡ ನಗರದಾದ್ಯಂತ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಜನರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಹೆಸ್ಕಾಂ ಸಿಬ್ಬಂದಿ ಕರ್ತವ್ಯ ನಿರತರಾಗಿದ್ದಾರೆ. ಮಳೆಯನ್ನು ಲೆಕ್ಕಿಸದೇ ಹೆಸ್ಕಾಂ ಸಿಬ್ಬಂದಿ ಸುರಕ್ಷಿತವಾಗಿ ವಿದ್ಯುತ್ ಸಮಸ್ಯೆ ಆಗದಂತೆ ಕಾರ್ಯ ನಿರ್ವಹಿಸುತ್ತಿರುವ ದೃಶ್ಯಗಳು ಧಾರವಾಡ ನಗರದಲ್ಲಿ ಕಂಡುಬಂತು.
ಜನರಿಗೆ ಅನಾನುಕೂಲ ಆಗದಂತೆ ಹೆಸ್ಕಾಂ ಸಿಬ್ಬಂದಿ ತಂಡ ರಚನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಹೆಸ್ಕಾಂ ಸಿಬ್ಬಂದಿ ಕೆಲಸಕ್ಕೆ ಸೆಲ್ಯೂಟ್ ಎನ್ನುತ್ತಿದ್ದಾರೆ.
Kshetra Samachara
24/07/2024 07:59 pm