ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅಂದರ್ ಆಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಊಟ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ACMM ನ್ಯಾಯಾಲಯದ ನ್ಯಾಯಾಧೀಶರು, ದರ್ಶನ್ ಅವರಿಗೆ ಮನೆಯಿಂದ ಊಟ ಸೇವನೆಗೆ ನಿರಾಕರಣೆ ಮಾಡಿದ್ದು, ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ದರ್ಶನ್ಗೆ ಇನ್ಮುಂದೆ ಜೈಲು ಊಟವೇ ಗತಿಯಾಗಿದೆ.
PublicNext
25/07/2024 03:42 pm