ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೆನ್‌ಡ್ರೈವ್ ಹಂಚಿಕೆಯಲ್ಲಿ ನಾನು ಭಾಗಿಯಾಗಿಲ್ಲ - ಜೈಲಿನಿಂದ ಹೊರಬಂದ ವಕೀಲ ದೇವರಾಜೇಗೌಡ ಸ್ಪಷ್ಟನೆ

ನವದೆಹಲಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಅಶ್ಲೀಲ ಪೆನ್‌ ಡ್ರೈವ್ ಹಂಚಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಪ್ರಕರಣದಲ್ಲಿ ಜಾಮೀನು ಆಧಾರದಲ್ಲಿ ಬಿಡುಗಡೆ ಆಗಿರುವ ವಕೀಲ ದೇವರಾಜೇಗೌಡ ಹೇಳಿದ್ದಾರೆ.

ಬಿಡುಗಡೆ ನಂತರ ಮೊದಲ ಬಾರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಚರ್ಚಿಸಿದ ನಂತರ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಭೇಟಿ ಬಳಿ ಮಾತನಾಡಿದ ದೇವರಾಜೇಗೌಡ, ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದೇನೆ. ಪೆನ್ ಡ್ರೈವ್ ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ ಎಂದು ತಿಳಿಸಿದರು. ನಾನು ಯಾವತ್ತೂ ದೇವೇಗೌಡರ ವಿರುದ್ಧ ಮಾತನಾಡಿಲ್ಲ. ರೇವಣ್ಣ ವಿರುದ್ಧ ಅಲ್ಲ, ಅವರ ಕೆಟ್ಟ ಗುಣಗಳ ವಿರುದ್ಧ ಹೋರಾಟ ಮಾಡಿದ್ದೇನೆ. ಈಗ ರೇವಣ್ಣ ಅವರಿಗೂ ಪಶ್ಚಾತ್ತಾಪವಾಗಿದೆ. ಸಾರ್ವಜನಿಕವಾಗಿ ಮರ್ಯಾದೆ ಹೋಗಿದೆ. ಎಸ್‌ಐಟಿ ರಚನೆಯಾಗಿ ತನಿಖೆ ನಡೆಯುತ್ತಿದೆ. ಯಾರು ಪೆನ್ ಡ್ರೈವ್ ಹಂಚಿಕೆ ಮಾಡಿದ್ದು ಎಂದು ಪೆನ್‌ಡ್ರೈವ್‌ನಲ್ಲಿ ಗೊತ್ತಾಗಿದೆ. ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

26/07/2024 04:45 pm

Cinque Terre

286.17 K

Cinque Terre

0