ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಗಿಲ್ ವಿಜಯೋತ್ಸವ - ಧಾರವಾಡದಲ್ಲಿ ಪಂಜಿನ ಮೆರವಣಿಗೆ

ಧಾರವಾಡ: ಕಾರ್ಗಿಲ್ ಯುದ್ಧದಲ್ಲಿ ಭಾರತ ಜಯ ಸಾಧಿಸಿ ಇಂದಿಗೆ 25 ವರ್ಷ ಗತಿಸಿದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ ಮಾಡಲಾಯಿತು.

ಕಾರ್ಗಿಲ್ ಯುದ್ಧದಲ್ಲಿ ಅನೇಕ ಭಾರತೀಯ ಯೋಧರು ವೀರ ಮರಣ ಹೊಂದಿದ್ದು, ಅವರ ಸ್ಮರಣಾರ್ಥ ಬಿಜೆಪಿ ಕಾರ್ಯಕರ್ತರು ಧಾರವಾಡದಲ್ಲಿ ಪಂಜಿನ ಮೆರವಣಿಗೆ ಮಾಡಿದರು.

ಜುಲೈ 26 ಕಾರ್ಗಿಲ್ ವಿಜಯ ದಿವಸವಾಗಿದ್ದರಿಂದ ಧಾರವಾಡದ ಮಾಳಮಡ್ಡಿಯಿಂದ ಬಿಜೆಪಿ ಕಾರ್ಯಕರ್ತರು ಪಂಜಿನ ಮೆರವಣಿಗೆ ಮಾಡಿದರು. ಅಲ್ಲಿಂದ ಪ್ರಾರಂಭವಾದ ಮೆರವಣಿಗೆ ಡಿಸಿ ಕಂಪೌಂಡ್‌ನಲ್ಲಿರುವ ಕಾರ್ಗಿಲ್ ಸ್ತೂಪಕ್ಕೆ ಬಂದು ಮುಕ್ತಾಯವಾಯಿತು. ಅಲ್ಲಿ ಎಲ್ಲ ಕಾರ್ಯಕರ್ತರು ನಮನ ಸಲ್ಲಿಸುವ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಪ್ರಾಣತ್ಯಾಗ ಮಾಡಿದ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಅಲ್ಲದೇ ದೇಶ ಭಕ್ತಿಯ ಘೋಷಣೆಗಳನ್ನು ಕೂಗಿ ದೇಶಾಭಿಮಾನ ಮೆರೆದರು.

Edited By : Manjunath H D
Kshetra Samachara

Kshetra Samachara

26/07/2024 08:50 pm

Cinque Terre

28.93 K

Cinque Terre

0

ಸಂಬಂಧಿತ ಸುದ್ದಿ