ಧಾರವಾಡ: ರಸ್ತೆಯೊಂದರಲ್ಲಿ ಶವ ಹೊತ್ತುಕೊಂಡು ಹೋಗಲು ಜನ ಅಕ್ಷರಶಃ ಪರದಾಡಿದ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ನಡೆದಿದೆ.
ತಮ್ಮ ಕ್ಷೇತ್ರದಲ್ಲಿ ಸುಸಜ್ಜಿತ ಚಕ್ಕಡಿ ರಸ್ತೆಗಳಾಗುತ್ತಿವೆ ಎಂದು ಹೇಳಿಕೊಳ್ಳುವ ಶಾಸಕ ಎನ್.ಎಚ್.ಕೋನರಡ್ಡಿ ಅವರ ಕಾರ್ಯಕ್ಕೆ ಕೈಗನ್ನಡಿ ಹಿಡಿದಂತಿದೆ ಈ ರಸ್ತೆ.
ಕಳೆದ 20-25 ವರ್ಷಗಳಿಂದ ಈ ರಸ್ತೆಯ ಸ್ಥಿತಿ ಹೀಗೇ ಇದ್ದು, ಮಳೆಯಾದರೆ ಸಾಕು ಈ ರಸ್ತೆ ಕೆಸರು ಗದ್ದೆಯಂತಾಗುತ್ತದೆ. ಈ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಆ ಶವವನ್ನು ಅಂತ್ಯಸಂಸ್ಕಾರಕ್ಕೆಂದು ತೆಗೆದುಕೊಂಡು ಹೋಗಲು ಜನ ಅಕ್ಷರಶಃ ಪರದಾಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ 100 ಕೋಟಿಯ ಚಕ್ಕಡಿ ರಸ್ತೆ ನಿರ್ಮಾಣ ಮಾಡಿರುವುದಾಗಿ ಹೇಳಿಕೊಳ್ಳುವ ಶಾಸಕ ಕೋನರಡ್ಡಿ ಅವರಿಗೆ ಈ ರಸ್ತೆ ಕಾಣಿಸುತ್ತಿಲ್ಲವೇ ಎಂದು ಅಲ್ಲಿನ ಜನ ಪ್ರಶ್ನೆ ಮಾಡುತ್ತಿದ್ದಾರೆ.
Kshetra Samachara
02/09/2024 12:28 pm