ಕಾಪು ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಹಭಾಗಿತ್ವದೊಂದಿಗೆ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಗೋಪಾಲಕೃಷ್ಣ ಗಾಂವ್ಕರ್ ಮಾತನಾಡಿ, ಶಿಕ್ಷಕ ನಿರಂತರ ಓದುಗನಾಗಿ, ಹೊಸತನಗಳನ್ನು ಅಧ್ಯಯನ ಮಾಡುತ್ತಿರಬೇಕು. ಶಿಕ್ಷಕರ ಪರಿಪೂರ್ಣ ಪ್ರಯತ್ನ ಮತ್ತು ಉತ್ತಮವಾದ ಶೈಕ್ಷಣಿಕ ಭೋದನೆಯಿಂದ ಮಾತ್ರ ಸಧೃಢ ಸಮಾಜ ನಿರ್ಮಾಣ ಸಾಧ್ಯವಿದೆ ಎಂದರು.
ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕ ಡಾ. ಪ್ರಶಾಂತ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಗೋವಿಂದ ಶೆಟ್ಟಿ ಮೆಮೋರಿಯಲ್ ಟ್ರಸ್ಟ್ ನ ಅಧ್ಯಕ್ಷೆ ಶೋಭಾ ಪಿ. ಶೆಟ್ಟಿ, ದಂಡತೀರ್ಥ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಅಲ್ಭನ್ ರೋಡ್ರಿಗಸ್, ಪ್ರಾಂಶುಪಾಲ ಎಂ. ನೀಲಾನಂದ ನಾಯ್ಕ್, ಸಂಸ್ಥೆಯ ಶಿಕ್ಷಣ ಸಂಯೋಜಕ ಶಿವಣ್ಣ ಬಾಯಾರ್ , ಆಂಗ್ಲ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯ ಗೇಬ್ರಿಯಲ್ ಮಸ್ಕರೇನಸ್, ರಕ್ಷಕ - ಶಿಕ್ಷಕ ಸಂಘದ ಅಧ್ಯಕ್ಷರಾದ ಮಂಜುಳಾ ಆರ್. ಶೆಟ್ಟಿ, ಸ್ವಾತಿ ಭಂಡಾರಿ, ಕನ್ನಡ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯಿನಿ ಕೃಪಾ ಸೋನ್ಸ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
05/09/2024 09:44 pm