ಬೆಂಗಳೂರು: ಗಣೇಶ ಹಬ್ಬಕ್ಕೆ ಎಲ್ಲೆಡೆ ಸಂಭ್ರಮ ಮನೆ ಮಾಡಿದ್ದು, ಗುರುವಾರ ನಗರದ ಮಾರುಕಟ್ಟೆಗಳಲ್ಲಿ ವ್ಯಾಪಾರ ಕಳೆಗಟ್ಟಿತ್ತು. ಕೃಷ್ಣರಾಜೇಂದ್ರ ಮಾರುಕಟ್ಟೆ, ಯಶವಂತಪುರ, ದಾಸರಹಳ್ಳಿ, ಮಲ್ಲೇಶ್ವರ, ಮಡಿವಾಳ, ಜಯನಗರ, ಬನಶಂಕರಿ ಮಾರುಕಟ್ಟೆಗಳಲ್ಲಿ ಬೆಳಗ್ಗೆಯಿಂದಲೇ ಜನರು ಜಮಾಯಿಸಿ ಖರೀದಿಯಲ್ಲಿ ನಿರತರಾಗಿದ್ದರು. ಪರಿಣಾಮ, ಮಾರುಕಟ್ಟೆಗಳ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರದಟ್ಟಣೆ ಉಂಟಾಗಿ ವಾಹನಸವಾರರು ಪರದಾಡಬೇಕಾಯಿತು.
Kshetra Samachara
06/09/2024 10:05 am