ಬೆಂಗಳೂರು: ಬೆಂಗಳೂರಿನ ಐಟಿಪಿಎಲ್ ಸಮೀಪದ ನಲ್ಲೂರಹಳ್ಳಿ ಮೆಟ್ರೋ ಸ್ಟೇಷನ್ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಹಲವು ವರ್ಷಗಳಿಂದ ಇದ್ದ ಹೋಟೆಲ್, ಟೀ ಸ್ಟಾಲ್ ಅಂಗಡಿಗಳನ್ನು ಬಿಬಿಎಂಪಿ ಅಧಿಕಾರಿಗಳು ಇಂದು ತೆರವುಗೊಳಿಸಿದ್ದಾರೆ.
ಹೀಗಾಗಿ ಅಧಿಕಾರಿಗಳ ನಡೆಗೆ ಬೀದಿಬದಿ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ವ್ಯಾಪಾರಿಗಳು ಮಾತನಾಡಿ ಇಪ್ಪತ್ತು ,ಇಪ್ಪತ್ತೈದು ವರ್ಷಗಳಿಂದ ಈ ಭಾಗದಲ್ಲಿ ಹೋಟೆಲ್ ನಿರ್ಮಿಸಿ ಜೀವನ ಸಾಗಿಸುತ್ತಿದ್ದೇವೆ. ಆದರೆ ಈಗ ಬಿಬಿಎಂಪಿ ಅಧಿಕಾರಗಳು ಏಕಾಏಕಿ ನಮ್ಮ ಅಂಗಡಿಗಳನ್ನ,ಬಂಡಿಗಳನ್ನು ತೆರವುಗೊಳಿಸಿದ್ದಾರೆ. ಇದರಿಂದ ನಮ್ಮ ಜೀವನ ಬೀದಿಗೆ ಬಿದ್ದಿದೆ ಎಂದು ಆತಂಕ ವ್ಯಕ್ತಪಡಿಸಿದರು .
Kshetra Samachara
06/09/2024 02:11 pm