ಪಡುಬಿದ್ರಿ: ಉಡುಪಿ ಜಿಲ್ಲೆಯಲ್ಲಿಯೇ ಉತ್ತಮ ಸಹಕಾರಿ ಸಂಘ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ́ಎ́ ಶ್ರೇಣಿಯ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ "ಸಹಕಾರ ಸಂಕೀರ್ಣ" ಮತ್ತು ನವೀಕೃತ ಹವಾನಿಯಂತ್ರಿತ ಶಾಖೆಯು ಸೆಪ್ಟಂಬರ್ 9 ಸೋಮವಾರ ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಅಧ್ಯಕ್ಷ ವೈ .ಸುಧೀರ್ ಕುಮಾರ್ ಹೇಳಿದರು.
ಅವರು ಪಡುಬಿದ್ರಿ ಸೊಸೈಟಿಯ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಮ್.ಎನ್. ರಾಜೇಂದ್ರ ಕುಮಾರ್ ನೂತನ ಕಟ್ಟಡ ಸಂಕೀರ್ಣ ಮತ್ತು ನವೀಕೃತ ಪಲಿಮಾರು ಶಾಖೆಯನ್ನು ಉದ್ಘಾಟಿಸಲಿದ್ದಾರೆ.
ಪಡುಬಿದ್ರಿ ಸೊಸೈಟಿಯ ಅಧ್ಯಕ್ಷ ವೈ ಸುಧೀರ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮಂಗಳೂರು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ಚಂದ್ರ ಡಿ. ಸುವರ್ಣ ಸೇರಿದಂತೆ ವಿವಿದ ಗಣ್ಯರು ಉಪಸ್ಥಿತರಿರುವರು.
ಸಮಾರಂಭದಲ್ಲಿ ಎಮ್.ಎನ್ ರಾಜೇಂದ್ರ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ., ಭಾರತ ಕಬ್ಬಡಿ ತಂಡದ ಮಾಜಿ ನಾಯಕ ಶೇಖರ ಶೆಟ್ಟಿ, ಯುವ ಕೃಷಿಕ ರೋಹಿತ್ ಶೆಟ್ಟಿ, ಯುವ ಸಮಾಜ ಸೇವಕ ಶರಣ್ ಕುಮಾರ್ ಮಟ್ಟುರವರನ್ನು ಸನ್ಮಾನಿಸಲಾಗುವುದು.
ಸುದ್ದಿಗೋಷ್ಠಿಯಲ್ಲಿ ಸೊಸೈಟಿಯ ನಿರ್ದೇಶಕರುಗಳಾದ ರಸೂಲ್ ವೈ.ಜಿ., ಗಿರೀಶ್ ಪಲಿಮಾರು, ರಾಜಾರಾಮ ರಾವ್, ಮಾಧವ ಆಚಾರ್ಯ, ಸ್ಟ್ಯಾನ್ಲಿ ಕ್ವಾಡ್ರಸ್, ಸುಚರಿತಾ ಎಲ್. ಅಮೀನ್, ಕುಸುಮಾ ಎಮ್. ಕರ್ಕೇರ, ಕಾಂಚನಾ, ಮುಖ್ಯ ಕಾರ್ಯನಿರ್ವಹಣಾಕಾರಿ ನಿಶ್ಮಿತಾ ಪಿ.ಎಚ್. ಉಪಸ್ಥಿತರಿದ್ದರು.
Kshetra Samachara
06/09/2024 05:00 pm