ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ದೊಡ್ಡದಾಗುತ್ತಿದೆ ಸಿಎಂ ಆಕಾಂಕ್ಷಿಗಳ ಪಟ್ಟಿ - ವಿಜಯೇಂದ್ರ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಾದ ಸಂದರ್ಭಕ್ಕೆ ಬಂದು ನಿಂತಿದ್ದಾರೆ. ಕಾಂಗ್ರೆಸ್ ಸರಕಾರದ ಬೆದರಿಕೆಗಳು, ಬೆದರಿಕೆ ತಂತ್ರಗಳು, ಕುತಂತ್ರ ಇದ್ಯಾವುದಕ್ಕೂ ಕೂಡ ಭಯ ಪಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯಯೇಂದ್ರ ಹೇಳಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಳೆದ ಕೆಲವು ದಿನಗಳಿಂದ ಹೋರಾಟ ಮಾಡುತ್ತ ಬಂದಿದೆ. ಮುಖ್ಯಮಂತ್ರಿಗಳ ಪರಿಸ್ಥಿತಿ, ಸಚಿವರ ಪರಿಸ್ಥಿತಿ ಸಹಜವಾಗಿಯೇ ನಮಗೆ ಅರ್ಥವಾಗುತ್ತಿದೆ. ಸಿಎಂ ರಾಜೀನಾಮೆ ಕೊಡಬೇಕಾದ ಸಂದರ್ಭ ಬಂದಿದ್ದು, ಅದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿಯೇ ಪಿತೂರಿ ನಡೆದಿದೆ. ಸಂದರ್ಭ ಬಂದಾಗ ಅದಕ್ಕೆ ಸೂಕ್ತ ಉತ್ತರ ಕೊಡಲಿದ್ದೇವೆ.

ಮುಖ್ಯಮಂತ್ರಿಗಳು ಹೋಗುವ ಮುಂಚಿತವಾಗಿಯೇ ನಿನ್ನೆ ದಿನ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಕಲೇಶಪುರಕ್ಕೆ ತೆರಳಿ ಪೂಜೆ ಪುನಸ್ಕಾರ ಮಾಡಿದ್ದನ್ನು ಗಮನಿಸಿದ್ದೇನೆ. ಮುಖ್ಯಮಂತ್ರಿ ಸ್ಥಾನ ಅಲುಗಾಡುವ ಸಂದರ್ಭ ಇದಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ. ಡಿ.ಕೆ. ಶಿವಕುಮಾರ್ ಕೂಡ ಆ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಇದ್ದಾರೆ ಎಂದರು.

Edited By : Vinayak Patil
PublicNext

PublicNext

06/09/2024 06:19 pm

Cinque Terre

36.65 K

Cinque Terre

0

ಸಂಬಂಧಿತ ಸುದ್ದಿ