ಧಾರವಾಡ: ಧಾರವಾಡ ಜಿಲ್ಲೆಯ ವಾಲ್ಮೀಕಿ ಸಮಾಜದ ಅಭ್ಯುದಯಕ್ಕಾಗಿ ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಧಾರವಾಡದ ರಾಯಾಪುರದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕಾಗಿ 1.5 ಎಕರೆ ಜಮೀನು ಮಂಜೂರು ಮಾಡಲಾಗಿತ್ತು.
ಅತ್ಯುತ್ತಮವಾದ ಪರಿಸರದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಮಾಡಲು ಇಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಅರವಿಂದ ಬೆಲ್ಲದ ಅವರು ಭೂಮಿ ಪೂಜೆ ನೆರವೇರಿಸಿದರು.
ಅಂದಾಜು 4 ಕೋಟಿ ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಲಿದೆ. ಈ ಭವನ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ಜಗದ್ಗುರು ಪ್ರಸನ್ನಾನಾಂದ ಸ್ವಾಮೀಜಿ ಅವರು ಭೂಮಿಪೂಜೆ ನೆರವೇರಿಸಿದರು.
ಪಾಲಿಕೆ ಮೇಯರ್ ರಾಮಣ್ಣ ಬಡಿಗೇರ, ಪಾಲಿಕೆ ಸದಸ್ಯೆ ನೀಲಮ್ಮ ಅರಿವಾಳ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಮೋಹನ ಗುಡಸಲಮನಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Kshetra Samachara
07/09/2024 01:44 pm