ನವಲಗುಂದ: ಪಟ್ಟಣದ ವಿನಾಯಕ ಪೇಟೆಯ ಶ್ರೀ ಗಣಪತಿ ದೇವಸ್ಥಾನದಲ್ಲಿ ಅದ್ಧೂರಿಯಾದ ಗಣೇಶೋತ್ಸವ ಕಾರ್ಯಕ್ರಮ ಜರುಗಿದ್ದು, ಒಂಬತ್ತು ದಿನಗಳ ಕಾಲ ನಡೆಯುವ ವಾಹನ ಕಾರ್ಯಕ್ರಮಕ್ಕೆ ಇಂದು ಚಾಲನೆ ದೊರೆಯಿತು.
ಕಾರ್ಯಕ್ರಮದ ಸಾನಿಧ್ಯವನ್ನು ಗವಿಮಠದ ಶ್ರೀ ಬಸವಲಿಂಗ ಮಹಾಸ್ವಾಮಿಗಳು ವಹಿಸಿ ವಾಹನ ಮೆರವಣಿಗೆಗೆ ಚಾಲನೆ ನೀಡಿದರು. ಮೊದಲನೇ ದಿನವಾದ ಇಂದು ಸಿಂಹ ವಾಹನ ಮೆರವಣಿಗೆ ನಡೆಯಿತು.
ಇನ್ನೂ ನಗರದ ಗುರು ಹಿರಿಯರು ಪಂಜು ಹಿಡಿದು, ಮಹಿಳೆಯರು ಆರತಿ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
Kshetra Samachara
07/09/2024 08:34 pm