ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ಕಳಪೆ ಗುಣಮಟ್ಟದ ಮಾಂಸ ಸರಬರಾಜು ಹಿನ್ನಲೆ ಎಚ್ಚೆತ್ತ ಆಹಾರ ಗುಣಮಟ್ಟ ಇಲಾಖೆಯಿಂದ ರೈಲ್ವೆ ನಿಲ್ದಾಣಗಳಲ್ಲಿ ತಪಾಸಣೆ ನಡೆಸಲು ಸೂಚನೆ ಕೊಡಲಾಗಿದೆ.
ರಾಜ್ಯಾದ್ಯಂತ ರೈಲ್ವೆ ನಿಲ್ದಾಣದ ಮಳಿಗೆಗಳಲ್ಲಿ ಆಹಾರ ತಪಾಸಣೆ ನಡೆಸುವಂತೆ ಸೂಚನೆ ಕೊಟ್ಟಿದ್ದು, ಆಹಾರ ಮಳಿಗೆಗಳಿಗೆ ತಪಾಸಣೆ ನಡೆಸುವ ವಿಶೇಷ ಆಂದೋಲನ ಕೈಗೊಳ್ಳಲು ಆಯುಕ್ತರಿಂದ ಸೂಚನೆ ಕೊಡಲಾಗಿದೆ. ರೈಲ್ವೆ ನಿಲ್ದಾಣದಲ್ಲಿರುವ ಆಹಾರ ಮಳಿಗೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ನಿಯಮಾವಳಿ ಪಾಲಿಸಲಾಗುತ್ತಿದೆಯಾ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದು ತಪಾಸಣೆ ವೇಳೆ ಕಂಡುಬಂದ ಲೋಪಗಳಿಗೆ ನಿಯಮಾನುಸಾರ ಕ್ರಮಕ್ಕೆ ಸೂಚನೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ನೀಡಿದೆ. ಆಯಾ ಜಿಲ್ಲಾ ಅಂಕಿತಾಧಿಕಾರಿಗಳು ತಪಾಸಣೆ ಮಾಡಿ ಕೇಂದ್ರ ಕಛೇರಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.
PublicNext
09/09/2024 08:47 am