ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ : ಮುತಾಲಿಕ್ ರಟ್ಟೀಹಳ್ಳಿ ಪ್ರವೇಶಕ್ಕೆ ನೋ ಅಂದ ಸರಕಾರ

ಹಾವೇರಿ : ಹಾವೇರಿ ಜಿಲ್ಲೆ ರಟ್ಟಿಹಳ್ಳಿ ಪಟ್ಟಣಕ್ಕೆ ಶ್ರೀ ರಾಮಸೇನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ್‌ಗೆ ನಿರ್ಬಂಧ ವಿಧಿಸಿ ಹಾವೇರಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ದಾನಮ್ಮನವರ್ ಆದೇಶಿಸಿದ್ದಾರೆ.

ಮುತಾಲಿಕ್ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮಕ್ಕೆ ನಿರ್ಬಂಧ ವಿಧಿಸಲಾಗಿದೆ.ರಟ್ಟಿಹಳ್ಳಿ ನಗರದ ಶ್ರೀ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾನೆ ವೇಳೆ ಈ ಹಿಂದೆ ಗಲಭೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಶ್ರೀ ಬೀರಲಿಂಗೇಶ್ವರ ಗೆಳೆಯರ ಬಳಗ ಆಯೋಜಿಸಿದ ಮೂರ್ತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಿಕೆ ತಡೆಯಲು ಮುತಾಲಿಕಗೆ ಹಾವೇರಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

ರಟ್ಟಿಹಳ್ಳಿ ಪಟ್ಟಣದ ಕುರುಬಗೇರಿ ಕ್ರಾಸ್ ಬಳಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ಮೂರ್ತಿ ವಿಸರ್ಜನೆ ಗುರುವಾರ ಇರುವ ಕಾರಣ ಈ ಆದೇಶ ನೀಡಲಾಗಿದೆ. ಈ ಗಣೇಶ ಮೂರ್ತಿ ವಿಸರ್ಜನೆ ವೇಳೆ ಪ್ರಮೋದ ಮುತಾಲಿಕ ಭಾಷಣ ಗಲಭೆ ಹಚ್ಚುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ.

Edited By : Nirmala Aralikatti
PublicNext

PublicNext

12/09/2024 11:38 am

Cinque Terre

14.35 K

Cinque Terre

1