ಹುಬ್ಬಳ್ಳಿ: ಕೆ.ಎಸ್.ಸಿ.ಎ ಧಾರವಾಡ ವಲಯವನ್ನು ಕನ್ವೇನಿಯರ್ ನಿಖಿಲ್ ಭೂಸದ ಅವರು ಬಿಡಿಕೆ ಫೌಂಡೇಶನ್ ಲಾಭಕ್ಕಾಗಿ ಉಪಯೋಗಿಸಿಕೊಳ್ಳುವ ಮೂಲಕ ಸಮಗ್ರ ಉತ್ತರ ಕರ್ನಾಟಕದ ಪ್ರತಿಭಾವಂತ ಕ್ರಿಕೆಟ್ ಪಟುಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಕೆ.ಎಸ್.ಸಿ.ಎ ಕ್ವಾಲಿಫೈಡ್ ಕೋಚ್ ಜಯರಾಜ್ ನೂಲ್ವಿ ಆರೋಪಿಸಿದ್ದಾರೆ.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 16 ವಯೋಮಿತಿಯ ಕ್ರೀಡಾಪಟುಗಳ ಆಯ್ಕೆಯಲ್ಲಿ ನಿಯಮಾವಳಿಗಳನ್ನು ಪಾಲಿಸದೇ ಬೇಕಾಬಿಟ್ಟಿಯಾಗಿ ಆಯ್ಕೆ ನಡೆಸಲಾಗಿದ್ದು, ಇದರಿಂದ ಪ್ರತಿಭಾವಂತ ಕ್ರೀಡಾಪಟುಗಳ ಭವಿಷ್ಯದೊಂದಿಗೆ ಆಟವಾಡಿದ್ದಾರೆ ಎಂದು ಆರೋಪಿಸಿದರು.
ಸೆಲೆಕ್ಷನ್ ಕಮಿಟಿಯವರು ನಡೆಸಬೇಕಿರುವ ಆಯ್ಕೆಯಲ್ಲಿ ಭೂಸದ ಯಾವುದೇ ಕಾರಣಕ್ಕೂ ಭಾಗಿಯಾಗಬಾರದೆಂಬ ನಿಯಮ ಇದೆ. ಆದರೆ, ಇದ್ಯಾವುದನ್ನು ಪರಿಗಣಿಸದೇ, ಆಯ್ಕೆ ಪ್ರಕ್ರಿಯೆಯಲ್ಲಿ ನೇರವಾಗಿ ಪಾಲ್ಗೊಂಡು ತಮಗೆ ಬೇಕಾದ ಕ್ರೀಡಾಪಟುಗಳಿಗೆ ಮಾತ್ರ ಅವಕಾಶ ಕಲ್ಪಿಸಿಕೊಡುತ್ತಿದ್ದಾರೆ ಎಂದು ದೂರಿದರು.
Kshetra Samachara
14/09/2024 04:29 pm