ಹುಬ್ಬಳ್ಳಿ:ಇಲ್ಲಿನ ಉಣಕಲ್ಲಿನ ಆರ್.ಕೆ.ಕೊಕಾಟಿ ಪ್ರೌಢಶಾಲೆ ತರಳಬಾಳು ಶಿಕ್ಷಣ ಸಂಸ್ಥೆ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪದವಿ ಪೂರ್ವ ವಿಭಾಗವು ಶನಿವಾರ (ಸೆ.14) ಆಯೋಜಿಸಿದ್ದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಧಾರವಾಡ ಕೆಎಲ್ಇ ಆರ್.ಎಲ್.ಎಸ್ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಚೈತ್ರಾ ಬಸವರಾಜ ಡೊಳ್ಳಿನ ಅವರು ಧಾರವಾಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.
ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ, ಸ್ಥಾನಿಕ ಆಡಳಿತ ಮಂಡಳಿ ನಿರ್ದೇಶಕರು,ಸದಸ್ಯರು,ಪ್ರಾಚಾರ್ಯರು,ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.
Kshetra Samachara
15/09/2024 12:53 pm