ಬೆಂಗಳೂರು: ಮುನಿರತ್ನ ಬಂಧನಕ್ಕೆ ಡಿ.ಕೆ ಸಹೋದರರತ್ತ ಬೊಟ್ಟು ಮಾಡುತ್ತಾ ಇರೋದಕ್ಕೆ ಡಿ.ಕೆ ಸುರೇಶ್ ಖಾರವಾಗಿ ಉತ್ತರ ಕೊಟ್ಟಿದ್ದಾರೆ. ಸಿನಿಮಾ ನಿರ್ಮಾಣ ಮತ್ತು ನಿರ್ದೇಶನವನ್ನು ಬಿಜೆಪಿ ಮತ್ತು ಜೆಡಿಎಸ್ ಅವರಿಗೆ ಬಿಟ್ಟಿದ್ದೇವೆ. ನಿರ್ಮಾಣ, ಕಟ್, ಆಕ್ಷನ್ ಎಲ್ಲವನ್ನು ಅವರಿಬ್ಬರಿಗೆ ಬಿಟ್ಟಿದ್ದೇವೆ. ಡಿ.ಕೆ ಸಹೋದರರನ್ನು ನೆನೆಸಿಕೊಳ್ಳದಿದ್ದರೆ ರಾಜಕೀಯವಾಗಿ ರಕ್ಷಣೆ ಸಿಗುವುದಿಲ್ಲ.
ಮೇಲೆ ಬರಲು ಸಾಧ್ಯವಿಲ್ಲ. ಏನೇ ಮಾಡಿದರು ಡಿ.ಕೆ ಸಹೋದರರನ್ನು ಗುರಿಯಾಗಿಸಿಕೊಳ್ಳಬೇಕು ಎಂದು ಎಲ್ಲರೂ ಹವಣಿಸುತ್ತಿರುತ್ತಾರೆ. ಅವರುಗಳ ರಾಜಕೀಯ ಬೆಳವಣಿಗೆಗೆ ಇದು ಸರಿಯೋ ತಪ್ಪು ಎಂಬ ಚರ್ಚೆ ಅವರಿಗೆ ಬಿಟ್ಟಿದ್ದು. ನಾವು ಗೌರವಯುತವಾಗಿ ಎಲ್ಲವನ್ನೂ ಸ್ವೀಕಾರ ಮಾಡುತ್ತೇವೆ. ಹಾಗೇ ಸಮಯ ಬಂದಾಗ ಅದಕ್ಕೆ ಉತ್ತರವನ್ನೂ ಕೊಡುತ್ತೇವೆ ಎಂದರು.
PublicNext
15/09/2024 05:38 pm