ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಸಸಿಹಿತ್ಲು ಬೀಚ್‌ನಲ್ಲಿ ಸ್ವಚ್ಛತೆ ಹಾಗೂ ಜಲ ಸಾಹಸ ಕ್ರೀಡೆ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಮುಲ್ಕಿ: ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸರ್ಫಿಂಗ್ ಖ್ಯಾತಿಯ ಹಳೆಯಂಗಡಿ ಸಮೀಪದ ಸಸಿಹಿತ್ಲು ಮುಂಡಾ ಬೀಚ್‌ನಲ್ಲಿ ಸ್ವಚ್ಛತೆ, ಜಲಸಾಹಸದ ಕ್ರೀಡೆ ನಡೆದು ಬೃಹತ್ ಮಾನವ ಸರಪಣಿ ನಡೆಯಿತು.

ಈ ಸಂದರ್ಭ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಾಣಿಕ್ಯ ಮಾತನಾಡಿ ಸಸಿಹಿತ್ಲು ಮುಂಡಾ ಬೀಚ್‌ನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯಶಸ್ವಿಯಾಗಿ ನಡೆದಿದ್ದು ಯುವ ಜನಾಂಗ ಸಂವಿಧಾನವನ್ನು ಗೌರವಿಸಿ ಎಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿವೇಕ ಆಳ್ವ, ಕೆಮ್ರಾಲ್ ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು. ಸ್ವಚ್ಛತೆಯಲ್ಲಿ ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Edited By : Vinayak Patil
PublicNext

PublicNext

15/09/2024 05:46 pm

Cinque Terre

28.87 K

Cinque Terre

0

ಸಂಬಂಧಿತ ಸುದ್ದಿ