ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು : ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ನಿನ್ನೆ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ

ಸುರತ್ಕಲ್: ಕೋಮು ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನ ಹೊರವಲಯದ ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ.

ಕಾಟಿಪಳ್ಳ 3ನೇ ಬ್ಲಾಕ್​​ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ. ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್​​ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದ ಮಸೀದಿಗೆ ಸದ್ಯ ಬಿಗಿ ಪೊಲೀಸ್​​​ ಬಂದೋಬಸ್ತ್​​​​​​​ ಕಲ್ಪಿಸಲಾಗಿದೆ.

Edited By : Abhishek Kamoji
PublicNext

PublicNext

16/09/2024 08:34 am

Cinque Terre

20.25 K

Cinque Terre

7

ಸಂಬಂಧಿತ ಸುದ್ದಿ