ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಡಿರುವ ಐವರು ಅರೆಸ್ಟ್

ಸುರತ್ಕಲ್: ಇಲ್ಲಿನ ಕೃಷ್ಣಾಪುರ ಕಾಟಿಪಳ್ಳ 3ನೇ ಬ್ಲಾಕ್‌ನಲ್ಲಿರುವ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು ಮತ್ತು ಮುಂಚೂರು ನಿವಾಸಿ ಸುಜಿತ್ ಎಂಬವರು ಬಂಧಿತ ಆರೋಪಿಗಳೆಂದು ತಿಳಿದುಬಂದಿದೆ.

ರವಿವಾರ ರಾತ್ರಿ ಜನತಾ ಕಾಲನಿಯ ಸ್ಮಶಾನದ ಕಡೆಯಿಂದ ಎರಡು ಬೈಕ್‌ಗಳಲ್ಲಿ ಆಗಮಿಸಿದ ಕಿಡಿಗೇಡಿಗಳು ಮಸ್ಜಿದುಲ್ ಹುದಾ ಜುಮಾ ಮಸೀದಿಯ ಹಿಂಭಾಗದ ಕಿಟಕಿಗಳಿಗೆ ಕಲ್ಲು ತೂರಾಡಿದ್ದಾರೆ. ಬಳಿಕ ಒಂದು ಬೈಕ್ ನಲ್ಲಿದ್ದ ಮೂವರು ಗಣೇಶ ಕಟ್ಟೆಯ ಕಡೆ ತೆರಳಿದ್ದರು. ಮತ್ತೊಂದು ಬೈಕ್‌ನಲ್ಲಿದ್ದ ಮತ್ತಿಬ್ಬರು ವಾಪಸ್ ಸ್ಮಶಾನದ ಕಡೆಗೆ ಬೈಕ್ ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ.

ಬಂಧಿತರ ಪೈಕಿ ಭರತ್ ಎಂಬಾತನ ವಿರುದ್ಧ ಹೊಡೆದಾಟಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿತ್ತು.

Edited By : Suman K
PublicNext

PublicNext

16/09/2024 12:16 pm

Cinque Terre

23.7 K

Cinque Terre

1

ಸಂಬಂಧಿತ ಸುದ್ದಿ