ಹುಬ್ಬಳ್ಳಿ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಕೇಸ್ ಪ್ರಕರಣಕ್ಕೆ ಸಂಭಂದಿಸಿದಂತೆ ಶಾಸಕ ಪ್ರಸಾದ ಅಬ್ಬಯ್ಯ ಪ್ರತಿಕ್ರಿಯೆ ನೀಡಿದ್ದಾರೆ.. ಮುನಿರತ್ನ ವಿರುದ್ಧ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಕೇಸ್ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಕಂಪ್ಲೇಂಟ್ ಕೊಟ್ಟ ಚೆಲುವರಾಜ ಇದೀಗ ಯೂ ಟರ್ನ್ ಹೊಡೆದಿದ್ದು, ಈ ಪ್ರಕರಣ ತಿರುವು ಪಡೆದಿದೆ.
ಗುತ್ತಿಗೆದಾರ ಚೆಲುವರಾಯನಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಮುನಿರತ್ನ ಆಡಿಯೋವನ್ನು ಈಗಾಗಲೇ ರಾಜ್ಯದ ಜನತೆ ಕೇಳಿದೆ. ಅದನ್ನು ಮರೆ ಮಾಚುವ ಸಲುವಾಗಿ ಮತ್ತೊಂದು ಆಡಿಯೋ ಲಾಂಚ್ ಮಾಡಲಾಗಿದೆ.
ಈ ಧ್ವನಿಯನ್ನು ಈಗಾಗಲೇ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸತ್ಯ ಹೊರ ಬರುತ್ತೆ, ಆಗ ಮುನಿರತ್ನನನ್ನು ಗಡಿಪಾರು ಮಾಡಲು ನಾವು ಕೂಡಾ ಒತ್ತಾಯ ಮಾಡ್ತೀವಿ, ಅಂತಾ ಶಾಸಕ ಪ್ರಸಾದ ಅಬ್ಬಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
16/09/2024 12:53 pm