ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಹುಲ್‌ ಗಾಂಧಿ ನಲಿಗೆ ಕತ್ತರಿಸಿದ್ರೆ 11 ಲಕ್ಷ ಬಹುಮಾನ ಘೋಷಿಸಿದ ಶಿವಸೇನಾ ಶಾಸಕ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯಿಂದ ಕಾಂಗ್ರೆಸ್ ನ ಅಸಲಿ ಮುಖ ಬಯಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಸಂವಿಧಾನಕ್ಕೆ ಅಪಾಯವಿದೆ, ಬಿಜೆಪಿಯವರು ಸಂವಿಧಾನ ಬದಲಿಸುತ್ತಾರೆ ಎಂದು ಸುಳ್ಳು ಹೇಳಿ ಮತ ಪಡೆದು ಇಂದು ಅಮೆರಿಕದಲ್ಲಿ ಬಾಬಾ ಸಾಹೇಬ್ ಡಾ.ಭೀಮ್ ರಾವ್ ಅಂಬೇಡ್ಕರ್ ಅವರು ನೀಡಿದ ಮೀಸಲಾತಿಯನ್ನು ಕೊನೆಗಾಣಿಸುತ್ತೇವೆ ಎನ್ನುವ ಮಾತು ಅವರ ಬಾಯಿಂದ ಬಂದಿವೆ. ಹೀಗೆ ಮಾತನಾಡಿದ ಅವರ ನಾಲಿಗೆಯನ್ನು ಯಾರು ಕತ್ತರಿಸುತ್ತಾರೋ ಅವರಿಗೆ 11 ಲಕ್ಷ ರೂ.ಬಹುಮಾನ ನೀಡಲಾಗುತ್ತದೆ ಎಂದು ಶಿವಸೇನಾ ಶಾಸಕ ಸಂಜಯ್‌ ಗಾಯಕ್ವಾಡ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇನ್ನು ಗಾಯಕ್‌ವಾಡ್‌ಗೆ ವಿವಾದಗಳು ಹೊಸದೇನಲ್ಲ. ಕಳೆದ ತಿಂಗಳು ಪೊಲೀಸರು ಅವರ ಕಾರು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

Edited By : Nirmala Aralikatti
PublicNext

PublicNext

16/09/2024 05:01 pm

Cinque Terre

144.5 K

Cinque Terre

21

ಸಂಬಂಧಿತ ಸುದ್ದಿ