ಹುಬ್ಬಳ್ಳಿ: ಕುಮಾರಸ್ವಾಮಿಯವರು ಬೇಕಾದಾಗ ಒಂದೊಂದು ಕಥೆ ಹೇಳ್ತಾರೆ. ಕಾಂಗ್ರೆಸ್ ಪಕ್ಷ ಯಾವತ್ತಿಗೂ ಪ್ರಜಾಪ್ರಭುತ್ವ, ಸಂವಿಧಾನ ಉಳಿಸುವ ಕಾರ್ಯವನ್ನು ಮಾಡುತ್ತಿದ್ದರೆ ಅದು ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಬಿಜೆಪಿ ಪಕ್ಷ ಬಂದಿದ್ದೇ ಸಂವಿಧಾನವನ್ನು ಬದಲಿ ಮಾಡಲಿಕ್ಕೆ. ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವ ಬೆಳವಣಿಗೆಗಳನ್ನು ದಿನ ಬೆಳಗಾದ್ರೆ ನಾವು ನೋಡ್ತೀವಿ. ಸಂವಿಧಾನವನ್ನು ಅಸ್ಥಿರ ಗೊಳಿಸುವ ಕಾರ್ಯವನ್ನು ಮಾಡೋದಿದ್ರೆ ಅದು ಕೇವಲ ಬಿಜೆಪಿ ಸರ್ಕಾರ ನಿರ್ಮಾಣ ಮಾಡ್ತಿದೆ.
ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವದ ವ್ಯವಸ್ಥೆ ಮತ್ತು ಪೀಠಿಕೆಯನ್ನು ಸಂವಿಧಾನದ ಜಾಗೃತಿ ಮೂಡಿಸುವ ಸಲುವಾಗಿ ಪ್ರಜಾಪ್ರಭುತ್ವ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡು ವಿಶ್ವ ದಾಖಲೆಯನ್ನು ಮಾಡಿದ್ದೇವೆ ಅಂತಾ ಶಾಸಕ ಪ್ರಸಾದ ಅಬ್ಬಯ್ಯ ಪ್ರತಿಕ್ರಿಯೆ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
16/09/2024 07:41 pm