ಹುಬ್ಬಳ್ಳಿ: ಅವಳಿ ನಗರದಲ್ಲಿ ನಡೆದ ಗಣೇಶ ವಿಸರ್ಜನೆ ಹಾಗೂ ಈದ್ ಮಿಲಾದ್ ಹಬ್ಬದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆಗಳಿಗೆ ಆಸ್ಪದ ಕೊಡದೆ ಶಾಂತವಾಗಿ ಎರಡು ಹಬ್ಬಗಳು ಆಚರಣೆ ಆದ ಹಿನ್ನೆಲೆ ಅವಳಿ ನಗರದ ಸಾರ್ವಜನಿಕರಿಗೆ ಕಮಿಷನರ್ ಶಶಿಕುಮಾರ್ ಧನ್ಯವಾದಗಳನ್ನು ತಿಳಿಸಿದರು.
ಅದರಲ್ಲೂ ವಿಶೇಷವಾಗಿ ಹುಬ್ಬಳ್ಳಿಯಲ್ಲಿ 7 ಹಾಗೂ 9ನೇ ದಿನದ ಗಣಪತಿ ವಿಸರ್ಜನೆ ಅತ್ಯಂತ ಶಾಂತವಾಗಿ ನಡೆದಿದೆ. ಇನ್ನು ಕೇವಲ 11 ದಿನದ ಗಣಪತಿ ವಿಸರ್ಜನೆ ನಡೆಯಲಿದ್ದು ಪೊಲೀಸ್ ಇಲಾಖೆಯಿಂದ ಸಾಕಷ್ಟು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ. ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪೊಲೀಸ್ ಅಧಿಕಾರಿಗಳು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಪ್ರತಿ ವರ್ಷ ಗಣೇಶನನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಬೇರೆ ಬೇರೆ ಕಡೆಗಳಿಂದ ಭಕ್ತಾದಿಗಳು ಬರುತ್ತಾರೆ. ಮುಂಬರುವ ದಿನಮಾನಗಳಲ್ಲಿ ಇಲ್ಲಿಗೆ ಬರುವ ಭಕ್ತಾದಿಗಳ ಸಂಖ್ಯೆ ಲಕ್ಷಗಟ್ಟಲೆ ಆಗಲಿ ಇದೊಂದು ಪುಣ್ಯ ಕ್ಷೇತ್ರ ಆಗಿ ಬೆಳೆಯಲಿ ಎಂದು ತಮ್ಮ ಆಶಯ ವ್ಯಕ್ತಪಡಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
16/09/2024 08:03 pm