ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮಹಿಳಾ ಕಲಾವಿದೆಯರಿಗೆ ರಕ್ಷಣೆ ಇಲ್ಲ ಅನ್ನೋ ಕಾರಣದಿಂದ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರಿಗೆ ರಕ್ಷಣೆ ಕಮಿಟಿ ಮಾಡಲೇಬೇಕು. ಇದು ಸರ್ಕಾರದ ಆದೇಶ. ಇದಕ್ಕಾಗಿ ಪೋಷ್ ಕಮಿಟಿ ಆಗಲೇಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಹೇಳಿದರು.
ಇಂದು ಬೆಂಗಳೂರಿನ ಫಿಲ್ಮ್ ಚೇಂಬರ್ನಲ್ಲಿ ಕಲಾವಿದೆಯರ ರಕ್ಷಣೆ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಅವರು ಮಹಿಳೆಯರಿಗೆ ರಕ್ಷಣೆ ಮುಖ್ಯ. ಪೋಷ್ ಕಮಿಟಿ ಮಾಡಲೇಬೇಕು ಎಂದು ಹೇಳಿದರು.
PublicNext
16/09/2024 09:51 pm