ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ನಾಳೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ನವಲಗುಂದ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ತಾಲೂಕಾ ಘಟಕದ ವತಿಯಿಂದ ಸೆ.18 ರಂದು ಬೆಳ್ಳಿಗೆ 11ಕ್ಕೆ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ಪ್ರತಿಭಾ ವಂತ ವಿದ್ಯಾರ್ಥಿಗಳಿಗೆ ಪತ್ರಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಘಟಕದ ಅಧ್ಯಕ್ಷ ಶಂಕರಗೌಡ ಬಾಳನಗೌಡ ಹೇಳಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸನ್ಮಾನ ಸಮಾರಂಭ ಹಾಗೂ ವಿದ್ಯಾರ್ಥಿಗಳಿಂದ 2ಎ ಮೀಸಲಾತಿ ಹಕ್ಕೊತ್ತಾಯ ಪತ್ರ ಚಳವಳಿ ಹಾಗೂ ಪದಗ್ರಹಣ ಸಮಾರಂಭ ಜರುಗಲಿದೆ. ಸಾನ್ನಿಧ್ಯವನ್ನು ಕೊಡಲಸಂಗಮದ ಪಂಚಮ ಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಹುನಗುಂದ ಶಾಸಕರಾದ ವಿಜಯಾನಂದ ಕಾಶಪ್ಪನವರ ಉದ್ಘಾಟಿಸುವರು.

ವಿದ್ಯಾರ್ಥಿಗಳ ಸನ್ಮಾನವನ್ನು ಕುಂದಗೋಳ ಶಾಸಕ ಎಂ.ಆರ್.ಪಾಟೀಲ ನೆರವೇರಿಸಲಿದ್ದಾರೆ. ಮಾಜಿ ಶಾಸಕ ಆರ್.ಬಿ.ಶಿರಿಯಣ್ಣವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಪುರಸ್ಕಾರ ವಿತರಣೆ, ಮಾಜಿ ವಿಧಾನ ಪರಿಷತ ಸದಸ್ಯ ಮೋಹನ ಲಿಂಬಿಕಾಯಿ ಲಾಂಛನ ಬಿಡುಗಡೆ ಗೊಳಿಸಲಿದ್ದಾರೆ. ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿ ಅವರು ಭಾವಚಿತ್ರ ಅನಾವರಣ ಮಾಡಲಿದ್ದಾರೆ ಎಂದರು.

ಪಂಚಮಸಾಲಿ ಎ2 ಮಿಸಲಾತಿ ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಕುಲಕರ್ಣಿ, ಪಂಚಮಸಾಲಿ ನಗರ ಘಟಕದ ಅಧ್ಯಕ್ಷ ಸುರೇಶ ಕಮ್ಮಾರ, ಸದುಗೌಡ ಪಾಟೀಲ, ಗೌರೀಶ ಕಮತರ, ಮಹೇಶ ಕುರ್ತುಕೋಟಿ, ಕೆ.ಜಿ ಮದ್ದೂರ, ದ್ಯಾಮನಗೌಡ ಪಾಟೀಲ, ನಾಗನಗೌಡ ಪಾಟೀಲ, ಅಶೋಕ ಮರಕುಂಬಿ ಪತ್ರಿಕಾಗೋಷ್ಠಿಯಲ್ಲಿದ್ದರು.

Edited By : PublicNext Desk
Kshetra Samachara

Kshetra Samachara

17/09/2024 09:07 am

Cinque Terre

8.97 K

Cinque Terre

0

ಸಂಬಂಧಿತ ಸುದ್ದಿ