ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು ದಂಡತೀರ್ಥ ಬಳಿ ಬಸ್ ಕಮರಿಗೆ : ಪ್ರಯಾಣಿಕರು ಅಪಾಯದಿಂದ ಪಾರು

ಕಾಪು : ಉಡುಪಿಯಿಂದ ಕಾಪುವಿಗೆ ಬರುತ್ತಿದ್ದ ಖಾಸಗಿ ಸರ್ವಿಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ಬೆಳಿಗ್ಗೆ ಕಾಪುವಿನಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ದಂಡತೀರ್ಥದಲ್ಲಿ ಈ ಘಟನೆ ಸಂಭವಿಸಿದ್ದು ಬಸ್ಸಿನಲ್ಲಿದ್ದ ಓರ್ವ ಮಹಿಳೆಗೆ ಗಾಯಗಳುಂಟಾಗಿವೆ.

ಉಡುಪಿಯಿಂದ ಕಾಪುವಿಗೆ ಬರುತ್ತಿದ್ದ ಬಸ್ ನಲ್ಲಿ 6-7 ಮಂದಿ ಪ್ರಯಾಣಿಕರು ಮಾತ್ರ ಇದ್ದುದ್ದರಿಂದ ಮತ್ತು ಬಸ್ ಕೂಡಾ ನಿಧಾನವಾಗಿ ಸಂಚರಿಸುತ್ತಿದ್ದುದರಿಂದ ಹೆಚ್ಚಿನ ಅಪಾಯವುಂಟಾಗಿಲ್ಲ.

ಸ್ಥಳೀಯರು ಬಸ್ ನಲ್ಲಿದ್ದವರಿಗೆ ಹೊರಗೆ ಬರಲು ಸಹಕರಿಸಿದ್ದು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nagesh Gaonkar
PublicNext

PublicNext

17/09/2024 12:00 pm

Cinque Terre

22.08 K

Cinque Terre

0

ಸಂಬಂಧಿತ ಸುದ್ದಿ